ಮಂಗಳೂರು: ಹೆಣ ಸಾಗಾಟಕ್ಕೂ ಹೆಣಗಾಟ - ಸಂಪರ್ಕ ರಸ್ತೆಯಿಲ್ಲದೆ ಪರದಾಟ


ಮಂಗಳೂರು: ದ.ಕ.ಜಿಲ್ಲೆಯ ಬೆಂಚಿನಡ್ಕ - ಕಾಜಲದಲ್ಲಿ  ಸರಿಯಾದ ರಸ್ತೆವಸಂಪರ್ಕ ವ್ಯವಸ್ಥೆಯಿಲ್ಲದೆ ಸ್ಥಳೀಯರು ಹೆಣ ಸಾಗಿಸಲು ಹೆಣಗಾಟ ನಡೆಸುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ.

ದ.ಕ.ಜಿಲ್ಲೆಯ ಬೆಂಚಿನಡ್ಕ - ಕಾಜಲವು ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳ ಗಡಿಭಾಗ. ಇಲ್ಲಿ ಹರಿಯುತ್ತಿರುವ ಹೊಳೆಗೆ ಸೇತುವೆ ಇಲ್ಲ. ಪರಿಣಾಮ ಇಲ್ಲಿನ ನಿವಾಸಿಗಳು ಹೊಳೆಗೆ ಅಡ್ಡಲಾಗಿ ಕಟ್ಟಿರುವ ಕಿಂಡಿ ಅಣೆಕಟ್ಟನ್ನೇ ಸಂಪರ್ಕ ರಸ್ತೆಯನ್ನಾಗಿ ಮಾಡಿದ್ದಾರೆ. ಇದೀಗ ಸ್ಥಳೀಯರು ಕಿಂಡಿ ಅಣೆಕಟ್ಟಿನ ಕಿರುದಾರಿಯಲ್ಲಿ ಮೃತಪಟ್ಟ ವೃದ್ಧೆಯೋರ್ವರ ಮೃತದೇಹವನ್ನು ಸಾಗಿಸಲು ಹೆಣಗಾಟ ನಡೆಸುತ್ತಿರುವ ವೀಡಿಯೋ ವೈರಲ್ ಆಗಿದೆ. 





ಇಲ್ಲೊಂದು ಸೇತುವೆ ನಿರ್ಮಾಣಕ್ಕಾಗಿ,  ಜನಪ್ರತಿನಿಧಿಗಳಿಗೆ, ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಯಾವುದೇ  ಪ್ರಯೋಜನವಾಗಿಲ್ಲ. ಆದ್ದರಿಂದ ಮಳೆಗಾಲದಲ್ಲಿ ಈ ರೀತಿಯಲ್ಲಿ ಕಷ್ಟಪಟ್ಟು ಸಂಚರಿಸಬೇಕಾದ ಪರಿಸ್ಥಿತಿ ಇದೆ.
BREAKING NEWS
Loading latest news...
Join our WhatsApp Channel Powered By : Online Pudu