-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು‌: ಚಡ್ಡಿಗ್ಯಾಂಗ್‌ನಿಂದ ಮತ್ತೊಂದು ಕಳವು ಕೃತ್ಯದ ಶಂಕೆ? - ಮನೆಮಂದಿ ಇದ್ದಾಗಲೇ ಚಿನ್ನಾಭರಣ, ವಾಹನ ಕದ್ದೊಯ್ದ ಕಳ್ಳರು

ಮಂಗಳೂರು‌: ಚಡ್ಡಿಗ್ಯಾಂಗ್‌ನಿಂದ ಮತ್ತೊಂದು ಕಳವು ಕೃತ್ಯದ ಶಂಕೆ? - ಮನೆಮಂದಿ ಇದ್ದಾಗಲೇ ಚಿನ್ನಾಭರಣ, ವಾಹನ ಕದ್ದೊಯ್ದ ಕಳ್ಳರು


ಮಂಗಳೂರು: ನಗರದ ಉರ್ವ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿನ ಮನೆಯೊಂದಕ್ಕೆ ಸೋಮವಾರ ರಾತ್ರಿ ನುಗ್ಗಿದ ಕಳ್ಳರು ವಾಹನ, ಚಿನ್ನಾಭರಣವನ್ನು ಕದ್ದೊಯ್ದ ಘಟನೆ ನಡೆದಿದೆ. ಇದು ನಗರದಲ್ಲಿ ನಡೆದ ಚಡ್ಡಿ‌ಗ್ಯಾಂಗ್‌ನ ಮತ್ತೊಂದು ಕೃತ್ಯವೆಂಬ ಶಂಕೆ ವ್ಯಕ್ತವಾಗಿದೆ.

ಮನೆಮಂದಿ ಮನೆಯೊಳಗಡೆ ಮಲಗಿದ್ದಾಗಲೇ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ. ಅಲ್ಲದೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ.

ಕಳೆದ ಶನಿವಾರ ನಗರದ ಕೋಡಿಕಲ್ ಬಳಿ ಮನೆಯೊಂದರ ಕಿಟಕಿ ಮುರಿದು ಕಳವು ಕೃತ್ಯ ನಡೆದಿತ್ತು. ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.‌ ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ