-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರಿನಲ್ಲಿ ‌ 13 ವರ್ಷದ ಬಾಲಕಿಯ ಕೊಲೆ

ಮಂಗಳೂರಿನಲ್ಲಿ ‌ 13 ವರ್ಷದ ಬಾಲಕಿಯ ಕೊಲೆ

Photo- AI



ಮಂಗಳೂರು: ನಗರದ ಜೋಕಟ್ಟೆಗೆ ಚಿಕಿತ್ಸೆಗೆಂದು ಬೆಳಗಾವಿಯಿಂದ‌ ಬಂದಿದ್ದ 13 ವರ್ಷದ ಬಾಲಕಿಯನ್ನು ಕೊಲೆ ಮಾಡಿದ  ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ  ನಡೆದಿದೆ.


4 ದಿನಗಳ ಹಿಂದೆ ಬೆಳಗಾವಿ ಮೂಲದ ಹನುಮಂತ ಎಂಬವರು ಮನೆಗೆ  ಅವರ ತಮ್ಮನ ಮಗಳು  13 ವರ್ಷದ ಬಾಲಕಿ ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದಳು. ಇಂದು ಜೋಕಟ್ಟೆಯ ಬಾಡಿಗೆ ಮನೆಯಿಂದ ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಬಾಲಕಿಯ ಕೊಲೆ ನಡೆದಿದೆ.


 ಇಂದು ಬೆಳಿಗ್ಗೆ 10.30 ಗಂಟೆಗೆ  ಬಾಲಕಿಯ ತಾಯಿಯು ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಪೋನ್ ಕೊಡಲು ಹೇಳಿದ್ದರು. ಅದರಂತೆ ಪಕ್ಕದ ಮನೆಯವರು ಪೋನ್ ಕೊಡಲು ಬಾಲಕಿಯು ವಾಸವಿದ್ದ ಬಾಡಿಗೆ ಮನೆಗೆ ಬಂದಾಗ ಬಾಲಕಿಯ ಕೊಲೆಯಾಗಿರುವುದು ತಿಳಿದುಬಂದಿದೆ.


ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಹತ್ಯೆ ಮಾಡಿದ ರೀತಿ ಕಂಡುಬಂದಿರುವುದನ್ನು ಪಕ್ಕದ ಮನೆಯವರು ತಾಯಿಗೆ ಪೋನಿನಲ್ಲಿ ತಿಳಿಸಿದ್ದಾರೆ. ಕೂಡಲೇ ಮೃತ ಬಾಲಕಿಯ ತಾಯಿಯು ಹನುಮಂತ ಅವರಿಗೆ ಪೋನ್ ಮೂಲಕ ಬಾಡಿಗೆ ಮನೆಗೆ ಹೋಗುವಂತೆ ತಿಳಿಸಿದ್ದು, ಹನುಮಂತನು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಣಂಬೂರು ಠಾಣೆಯಲ್ಲಿ ಈ ಬಗ್ಗೆ  ಪ್ರಕರಣ ದಾಖಲಾಗಿದೆ.


 

Ads on article

Advertise in articles 1

advertising articles 2

Advertise under the article

ಸುರ