-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರಿನಲ್ಲಿ ನೀರು ಸರಬರಾಜು ಕೊಳವೆ ದುರಸ್ತಿ: ನಗರದ ವಿವಿಧೆಡೆ ನಾಳೆ ( ಆ.16)  ಪೂರೈಕೆಯಲ್ಲಿ ವ್ಯತ್ಯಯ

ಮಂಗಳೂರಿನಲ್ಲಿ ನೀರು ಸರಬರಾಜು ಕೊಳವೆ ದುರಸ್ತಿ: ನಗರದ ವಿವಿಧೆಡೆ ನಾಳೆ ( ಆ.16) ಪೂರೈಕೆಯಲ್ಲಿ ವ್ಯತ್ಯಯ

 


ಮಂಗಳೂರು: ಪಾಲಿಕೆಯ ನೀರು ಸರಬರಾಜು ವ್ಯವಸ್ಥೆ ತುಂಬೆಯ ರೇಚಕ ಸ್ಥಾವರದಿಂದ ಪಣಂಬೂರ್ಗೆ ಪಂಪಿಂಗ್ ಮಾಡುವ 900 ಎಂ.ಎಂ. ವ್ಯಾಸದ ಕೊಳವೆಯ ತುರ್ತು ದುರಸ್ತಿ ಕಾಮಗಾರಿ ಕಾರಣ ಆ. 16ರಂದು ಬೆಳಗ್ಗೆ 6ರಿಂದ 24 ಗಂಟೆಗಳ ಕಾಲ ವಿವಿಧ ಕಡೆ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪ್ರಕಟನೆ ತಿಳಿಸಿದೆ.


ಪಣಂಬೂರಿನ ಎಂಸಿಎಫ್ ರೈಲ್ವೇ ಗೇಟ್ ಬಳಿ ಪೈಪ್ಲೈನ್ ತುರ್ತು ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ ಸುರತ್ಕಲ್, ಕಾಟಿಪಳ್ಳ, ಎನ್ಐಟಿಕೆ, ಎಂಸಿಎಫ್, ಕಾಪಿಕಾಡ್, ಕೂಳೂರು, ಜಲ್ಲಿಗುಡ್ಡೆ, ಕಾವೂರು ಭಾಗಶ, ಕೋಡಿಕಲ್ ಭಾಗಶ, ಪಚ್ಚನಾಡಿ, ಅಶೋಕನಗರ, ಮೂಡ ಪಂಪ್ಹೌಸ್, ದೇರೆಬೈಲ್, ಕುಳಾಯಿ, ಮುಕ್ಕ, ಪಣಂಬೂರು ಮೊದಲಾದ ಪ್ರದೇಶಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.



Ads on article

Advertise in articles 1

advertising articles 2

Advertise under the article

ಸುರ