-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ

ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ


ಬೆಳಗಾವಿ ಆ 26 : ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು  ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು. 




ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ‌ನಿಲ್ದಾಣದಲ್ಲಿ‌ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ‌ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು. 


ಕೈ ಮೇಲಾಗ್ಲಿ-ದೇಶ ಆಳು ದೊರೆಯೇ

ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರ್ಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದರು.

ಅಕ್ಕಾತಾಯಿ ಜೊತೆ ಬಂದಿದ್ದ ಇತರೆ ತಾಯಂದಿರು ಒಟ್ಟಾಗಿ ಮುಖ್ಯಮಂತ್ರಿಗಳಿಗೆ, ನಾವು ಲಕ್ಷ್ಮೀದೇವಿಗೆ ಪೂಜೆ ಮಾಡೀವಿ. ಕಂಟಕ ನಾಶ ಆಗ್ಲಿ ಅಂತ ದೇವಿಗೆ ಕೈಮುಗಿದೀವಿ ಎಂದು ಹಾರೈಸಿದರು.




ನಿಮ್ಮ ಆಶೀರ್ವಾದ ಹೀಗೇ ಇರಲಿ

ಅಕ್ಕಾತಾಯಿ ಮತ್ತು ಗ್ರಾಮದ ತಾಯಂದಿರು ಆಶೀರ್ವಾದ ಸ್ವೀಕರಿಸಿದ ಮುಖ್ಯಮಂತ್ರಿಗಳು ನಿಮ್ಮ ಆಶೀರ್ವಾದ ಹೀಗೇ ಇರಲಿ. ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿ ಯೋಜನೆ ನಿಲ್ಲಲ್ಲ. ಹೀಗೇ ಪ್ರತೀ ತಿಂಗಳು ನಿಮ್ಮ ಮಡಿಲು ಸೇರುತ್ತಿರುತ್ತದೆ ಎಂದರು. 

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಕ್ಕಾತಾಯಿ ಮತ್ತು ತಾಯಂದಿರಿಗೆ ಸೀರೆ, ಅರಸಿನ ಕುಂಕುಮ ಬಾಗಿನ ನೀಡಿ ಸನ್ಮಾನಿಸಿದರು.

Ads on article

Advertise in articles 1

advertising articles 2

Advertise under the article

ಸುರ