-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೃಷಿ ಪಂಪ್‌ಸೆಟ್‌ ಮೀಟರ್ ಅಳವಡಿಕೆ: ಆದೇಶ ಹಿಂದಕ್ಕೆ ಪಡೆಯಲು ರೈತ ಸಂಘ ಒತ್ತಾಯ

ಕೃಷಿ ಪಂಪ್‌ಸೆಟ್‌ ಮೀಟರ್ ಅಳವಡಿಕೆ: ಆದೇಶ ಹಿಂದಕ್ಕೆ ಪಡೆಯಲು ರೈತ ಸಂಘ ಒತ್ತಾಯ

ಕೃಷಿ ಪಂಪ್‌ಸೆಟ್‌ ಮೀಟರ್ ಅಳವಡಿಕೆ: ಆದೇಶ ಹಿಂದಕ್ಕೆ ಪಡೆಯಲು ರೈತ ಸಂಘ ಒತ್ತಾಯ




ರೈತರು ಬಳಸುವ ಕೃಷಿ ಪಂಪ್‌ಸೆಟ್‌ ಮೀಟರ್ ಅಳವಡಿಸಿ ಶುಲ್ಕ ವಿಧಿಸಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಕ್ರೋಶ ವ್ಯಕ್ತಪಡಿಸಿದೆ.

ಈ ಆದೇಶವನ್ನು ತಕ್ಷಣದಿಂದ ಹಿಂದಕ್ಕೆ ಪಡೆಯುವಂತೆ ರೈತ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.


ಈ ಹಿಂದೆ ಗುಂಡೂರಾವ್ ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ನಿರ್ಧಾರ ಕೈಗೊಂಡಿತ್ತು. ಆಗ ರೈತರು ರಾಜ್ಯ ಸರ್ಕಾರದ ವಿರುದ್ಧ ದಂಗೆ ಎದ್ದಿದ್ದರು ಎಂಬುದನ್ನು ರೈತ ಸಂಘದ ನಾಯಕರು ನೆನಪಿಸಿದರು.


ಆಗಿನ ಹೋರಾಟದ ಸಂದರ್ಭದಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವುದಿಲ್ಲ. ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಹೇಳಿದ್ದ ಗುಂಡೂರಾವ್ ಸರ್ಕಾರ ತಮ್ಮ ಮಾತಿನಂತೆ ನಡೆದುಕೊಂಡಿತ್ತು ಎಂದು ಹೇಳಿದ ಸಂಘಟನೆಯ ನಾಯಕರು, ಈಗ ಐದು ಭಾಗ್ಯಗಳನ್ನು ಕೊಟ್ಟಿರುವ ಸಿದ್ದರಾಮಯ್ಯ ಸರ್ಕಾರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ತಮ್ಮ ಮೇಲಿನ ಹೊರೆಯನ್ನು ತಗ್ಗಿಸಲು ರೈತರಿಂದ ಹಣ ವಸೂಲಿ ಮಾಡಲು ಹೊರಟಿರುವುದು ದುರದೃಷ್ಟಕರ ಎಂದು ವಿಷಾದ ವ್ಯಕ್ತಪಡಿಸಿದರು.


ಒಂದು ವೇಳೆ, ಇಂತಹ ಕ್ರಮಕ್ಕೆ ಮುಂದಾದರೆ, ರಾಜ್ಯವ್ಯಾಪಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ ಅವರು, ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕೋರಿ ಅರ್ಜಿ ಸಲ್ಲಿಸಿದರೆ ಉಚಿತ ಸಂಪರ್ಕ ನೀಡುವಂತೆ ಆದೇಶ ಹೊರಡಿಸಬೇಕು ಎಂದು ಅವರು ತಾಕೀತು ಮಾಡಿದರು.


Ads on article

Advertise in articles 1

advertising articles 2

Advertise under the article