-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹರೇಕಳದಲ್ಲಿ ಸರ್ವೆ ಬಳಿಕ ಫಲಾನುಭವಿಗಳಿಗೆ ಜಮೀನು ಹಂಚಿಕೆ - ಬಂದಿದೆ 400ಅರ್ಜಿಗಳು

ಹರೇಕಳದಲ್ಲಿ ಸರ್ವೆ ಬಳಿಕ ಫಲಾನುಭವಿಗಳಿಗೆ ಜಮೀನು ಹಂಚಿಕೆ - ಬಂದಿದೆ 400ಅರ್ಜಿಗಳು


ಮಂಗಳೂರು: ನಗರದ ಹೊರವಲಯದ ಮುಡಿಪು ಬಳಿಯ ಹರೇಕಳ ಗ್ರಾಮದಲ್ಲಿ 15ವರ್ಷಗಳ ಹಿಂದೆ ಸಾರ್ವಜನಿಕ ಉದ್ದೇಶಕ್ಕಾಗಿ ಜಮೀನು ಮೀಸಲಿಡಲಾಗಿದೆ. ಈಗ ಜಮೀನುರಹಿತರಿಗೆ ಎಂದು ಬದಲಾಯಿಸಲಾಗಿದೆ. ಈಗಾಗಲೇ 400ಅರ್ಜಿಗಳು ಬಂದಿದ್ದು, ಸರ್ವೆ ಬಳಿಕ ಫಲಾನುಭವಿಗಳಿಗೆ ಹಂಚಲಾಗುವುದು ಎಂದು ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ಹೇಳಿದರು.

ಹರೇಕಳ ಜಮೀನು ರಹಿತರಿಗೆ ನೀಡಲು ಉದ್ದೇಶಿಸಿರುವ ಜಮೀನಿನ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಈ ವೇಳೆ ಹರೇಕಳ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಮಜೀದ್ ಎಂ.ಪಿ.ಮಾತನಾಡಿ, ಈಗಾಗಲೇ ಕೆಲವು ಸಂಘಟನೆಗಳು ನಿವೇಶನಕ್ಕಾಗಿ ಪ್ರತಿಭಟನೆ ನಡೆಸಿವೆ. ನಿವೇಶನರಹಿತರಿಗೆ ಪಂಚಾಯತ್ ಈಗಾಗಲೇ 9.50 ಎಕರೆ ಮೀಸಲಿಟ್ಟಿದ್ದು, ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆ ಶೀಘ್ರ ಈಡೇರಲಿದೆ ಎಂದು ತಿಳಿಸಿದರು.

Ads on article

Advertise in articles 1

advertising articles 2

Advertise under the article