ಮಂಗಳೂರು: ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ - ಎಂಎಲ್‌ಸಿ ಐವನ್ ಮನೆಗೆ ಕಲ್ಲೆಸೆದ ದುಷ್ಕರ್ಮಿಗಳು



ಮಂಗಳೂರು: ರಾಜ್ಯಪಾಲರ ವಿರುದ್ಧದ ಎಂಎಲ್‌ಸಿ ಐವನ್ ಡಿಸೋಜಾ ನೀಡಿರುವ ವಿವಾದಾತ್ಮಕ ಹೇಳಿಕೆ  ವಿಕೋಪಕ್ಕೆ ತೆರಳಿದೆ. ಬುಧವಾರ ರಾತ್ರಿ 11ಗಂಟೆ ಸುಮಾರಿಗೆ ಐದಾರು ಮಂದಿ ದುಷ್ಕರ್ಮಿಗಳಿದ್ದ ತಂಡ ಐವನ್ ಮನೆಗೆ ಕಲ್ಲು ತೂರಾಡಿ ಪರಾರಿಯಾಗಿದ್ದಾರೆ.

ಸುಮಾರು 5ರಿಂದ 6ಮಂದಿಯಿದ್ದ ತಂಡ ರಾತ್ರಿ 11ಗಂಟೆ ಸುಮಾರಿಗೆ ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜರ ಮನೆ ಬಳಿ ಹೆಲ್ಮೆಟ್ ಧರಿಸಿ ಬಂದಿದ್ದಾರೆ. ಕಲ್ಲು ತೂರಾಡಿ ಘೋಷಣೆಗಳನ್ನು ಕೂಗಿ ಪರಾರಿಯಾಗಿದೆ ಎನ್ನಲಾಗಿದೆ. ಈ ಸಂದರ್ಭ ಐವನ್ ಡಿಸೋಜ ಮನೆಯಲ್ಲಿರದೆ ಬೆಂಗಳೂರಿನಲ್ಲಿ ಪಕ್ಷದ ಮೀಟಿಂಗ್‌ಗೆಂದು ಹೋಗಿದ್ದರು ಎನ್ನಲಾಗಿದೆ. 

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಯಾವುದೇ  ಹಾನಿಯಾಗಿಲ್ಲ ವೆಂದು ಹೇಳಲಾಗಿದೆ. ಸದ್ಯ ಅವರ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.