-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಗಾಂಧೀಜಿಗೆ ಅವಮಾನಿಸಿದ್ದು ದೇಶದ್ರೋಹ ಮಾಡಿದಂತೆ - ಶಾಸಕ ಹರೀಶ್ ಪೂಂಜಾ ಮೇಲೆ ಸರಕಾರ ಸುಮೋಟೊ ಕೇಸು ದಾಖಲಾಗಬೇಕು

ಮಂಗಳೂರು: ಗಾಂಧೀಜಿಗೆ ಅವಮಾನಿಸಿದ್ದು ದೇಶದ್ರೋಹ ಮಾಡಿದಂತೆ - ಶಾಸಕ ಹರೀಶ್ ಪೂಂಜಾ ಮೇಲೆ ಸರಕಾರ ಸುಮೋಟೊ ಕೇಸು ದಾಖಲಾಗಬೇಕು



ಮಂಗಳೂರು: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಾಂಧೀಜಿಯವರ ಅಹಿಂಸಾ ಹೋರಾಟವನ್ನು ಅಪಮಾನಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ಅವಮಾನ ದೇಶದ್ರೋಹಗೈದಂತೆ. ಆದ್ದರಿಂದ ಪೂಂಜಾ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಲ್ಲದೆ ಸುಮೋಟೊ ಕೇಸು ದಾಖಲಿಸಬೇಕೆಂದು ಮಾಜಿ ಸಚಿವ ರಮಾನಾಥ ರೈ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಈ ದೇಶಕ್ಕೆ ಅಹಿಂಸಾ ಮಾರ್ಗದಿಂದ ಸ್ವಾತಂತ್ರ್ಯ ದೊರಕಿದ್ದಲ್ಲ‌. ಚರಕದಿಂದ ಮಾತ್ರ ಸ್ವಾತಂತ್ರ್ಯ ಬಂದದ್ದಲ್ಲ ಎಂದು ಹರೀಶ್ ಪೂಂಜಾ ಹೇಳಿದ್ದಾರೆ. ಪ್ರಧಾನಿ ಮೋದಿಯವರು ವಿದೇಶದಿಂದ ಬರುವ ಗಣ್ಯರಿಗೆ ಚರಕವನ್ನು ತೋರಿಸಿ ಹೆಗ್ಗಳಿಕೆಯ ಮಾತುಗಳನ್ನು ಆಡುತ್ತಾರೆ. ಆದರೆ ಅವರ ಶಿಷ್ಯರು ಗಾಂಧೀಜಿಯವರಿಗೆ ಅಪಮಾನ ಮಾಡುವ ಕೆಲಸ ಮಾಡುತ್ತಾರೆ. 

ದ.ಕ‌.ಜಿಲ್ಲೆ ಮತೀಯ ಸೂಕ್ಷ್ಮ ಜಿಲ್ಲೆ‌. ಕೆಲವೊಂದು ಸಂದರ್ಭದಲ್ಲಿ ಇಲ್ಲಿ ಅವರವರ ಲಾಭಕ್ಕೆ ಅಡ್ಜಸ್ಟ್‌ಮೆಂಟ್ ರಾಜಕೀಯ ಮಾಡಲಾಗುತ್ತದೆ. ಅದು ಆಗಬಾರದು. ಸರಕಾರ ಕೂಡಾ ಈ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಆದ್ದರಿಂದ ಜಿಲ್ಲೆಯಲ್ಲಿ ಮತೀಯ ಸಾಮರಸ್ಯ ಕೆಡದ ರೀತಿಯಲ್ಲಿ ಕಾಪಾಡಬೇಕಿದೆ ಎಂದು ರಮಾನಾಥ ರೈ ಹೇಳಿದರು.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article