-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪತ್ನಿಯನ್ನು ತನ್ನ ಮನೆಗೆ ಕಳುಹಿಸದ ಕೋಪಕ್ಕೆ ಮಾವನ ಅಡಿಕೆ ತೋಟವನ್ನೇ ನಾಶ ಮಾಡಿದ ಅಳಿಯ

ಪತ್ನಿಯನ್ನು ತನ್ನ ಮನೆಗೆ ಕಳುಹಿಸದ ಕೋಪಕ್ಕೆ ಮಾವನ ಅಡಿಕೆ ತೋಟವನ್ನೇ ನಾಶ ಮಾಡಿದ ಅಳಿಯ


ಹಾವೇರಿ: ಪತ್ನಿಯನ್ನು ತನ್ನ ಮನೆಗೆ ಕಳುಹಿಸದ್ದಕ್ಕೆ ಕೋಪಗೊಂಡ ಅಳಿಯನೋರ್ವ ಮಾವನ ಅಡಿಕೆ ತೋಟವನ್ನೇ ನಾಶಪಡಿಸಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಬಸಾಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 

ದೇವೇಂದ್ರಪ್ಪ ಗಾಣಿಗೇರ ತನ್ನ ಹೊಲದಲ್ಲಿ ಅಡಿಕೆ ಗಿಡ ಹಾಕಿದ್ದರು. ಇದೀಗ ಗಿಡಗಳು ಬೆಳೆದು 2ವರ್ಷಗಳಾಗಿವೆ. ಇದೀಗ ದೇವೇಂದ್ರಪ್ಪರ ಅಳಿಯ ಬಸವರಾಜ ಈ ಅಡಿಕೆ ಗಿಡಗಳನ್ನು ಕಡಿದು ಹಾಕಿರುವುದಾಗಿ ಆರೋಪಿಸಿದ್ದಾರೆ. 

ಬಸವರಾಜ ಸೊರಬದ ಬೈದವಟ್ಟಿ ಗ್ರಾಮದವ. 10 ವರ್ಷ ಹಿಂದೆ ದೇವೇಂದ್ರಪ್ಪರ ಪುತ್ರಿಯನ್ನು ವಿವಾಹವಾಗಿದ್ದರು. ಆದರೆ ಪತಿಯ ಕಿರುಕುಳ ತಾಳಲಾರದೇ ಪತ್ನಿ 3 ತಿಂಗಳ ಹಿಂದೆ ತವರಿಗೆ ತೆರಳಿದ್ದರು. ಪತ್ನಿಯನ್ನು ತನ್ನೊಂದಿಗೆ ಕಳುಹಿಸುವಂತೆ ಬಸವರಾಜ ಪರಿಪರಿಯಾಗಿ ಕೇಳಿಕೊಂಡರೂ ಮಾವ ಕಳುಹಿಸಿಲ್ಲ ಎನ್ನಲಾಗಿದೆ. ಇದರಿಂದ ಕುಪಿತಗೊಂದ ಬಸವರಾಜ ಸೆ.23ರಂದು ಅಡಿಕೆ ಮರಗಳನ್ನು ಕಡಿದು ಹಾಕಿದ್ದಾನೆ ಎಂದು ದೂರಲಾಗಿದೆ.


Ads on article

Advertise in articles 1

advertising articles 2

Advertise under the article

ಸುರ