-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಳ್ತಂಗಡಿ: ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ

ಬೆಳ್ತಂಗಡಿ: ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ


ಬೆಳ್ತಂಗಡಿ: ಇಲ್ಲಿನ ಕಾಶಿಪಟ್ಣ ಗ್ರಾಮದಲ್ಲಿ ದಂಪತಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಭವಿಸಿದೆ.

ಕಾಶಿಪಟ್ಣ ಗ್ರಾಮದವರಾದ ನೊಣಯ್ಯ ಪೂಜಾರಿ (63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡ ದಂಪತಿ.

ದಂಪತಿ ಮನೆಯ ಸಮೀಪದ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನೊಣಯ್ಯ ಪೂಜಾರಿಯವರು ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಲ್ಲಿದ್ದರು. ಇದುವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ನೋಣಯ್ಯ ಪೂಜಾರಿಯವರಿಗೆ ಇದು 2ನೇ ಮದುವೆಯಾಗಿದೆ. ಅವರ ಮೊದಲ ಪತ್ನಿ 10ವರ್ಷದ ಹಿಂದೆ ಮೃತಪಟ್ಟಿದ್ದರು. ಕೆಲವು ವರ್ಷಗಳ ಹಿಂದೆ ಅವರು ಬೇಬಿಯವರನ್ನು 2ನೇ ವಿವಾಹವಾಗಿದ್ದರು. ಮೊದಲನೇ ಪತ್ನಿಗೆ ಐವರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಈ ಬಗ್ಗೆ ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article