-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಭಾರತದಲ್ಲಿ ಸದೃಢವಾದ ನ್ಯಾಯಾಂಗ ವ್ಯವಸ್ಥೆಯೊಂದು ಇದ್ದಿದ್ದರೆ ಮೋದಿ - ಯೋಗಿ ಜೈಲಿನಲ್ಲಿರುತ್ತಿದ್ದರು- ನಿಶ್ಚಲಾನಂದ ಸರಸ್ವತಿ

ಭಾರತದಲ್ಲಿ ಸದೃಢವಾದ ನ್ಯಾಯಾಂಗ ವ್ಯವಸ್ಥೆಯೊಂದು ಇದ್ದಿದ್ದರೆ ಮೋದಿ - ಯೋಗಿ ಜೈಲಿನಲ್ಲಿರುತ್ತಿದ್ದರು- ನಿಶ್ಚಲಾನಂದ ಸರಸ್ವತಿ


ಹೊಸದಿಲ್ಲಿ: 'ಭಾರತ ದೇಶದಲ್ಲಿ ಸದೃಢವಾದ ನ್ಯಾಯಾಂಗ ವ್ಯವಸ್ಥೆಯೊಂದು ಇದ್ದಿದ್ದರೆ ಮೋದಿ ಮತ್ತು ಯೋಗಿ ಜೈಲು ಪಾಲಾಗುತ್ತಿದ್ದರು' ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ವಿರುದ್ಧ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿಯವರು ತೀವ್ರ ವಾಗ್ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿಯ ಧರ್ಮಸಭೆಯಲ್ಲಿ ಭಾಗವಹಿಸಿದ್ದ ಅವರು, ಆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ್ದರು. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತದಲ್ಲಿ ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದರೆ ಮೋದಿ ಮತ್ತು ಯೋಗಿ ಜೈಲು ಪಾಲಾಗುತ್ತಿದ್ದರು ಎಂದು ಹೇಳಿದ್ದಾರೆ.


ಈ ಕುರಿತು ಹರೀಶ್ ತಿವಾರಿ ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಡಿದ್ದ ಪೋಸ್ಟ್ ಅನ್ನು ಹಂಚಿಕೊಂಡ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು, 'ನಿರ್ಭೀತ ಜಗದ್ಗುರು'ಎಂದು ಉಲ್ಲೇಖಿಸಿದ್ದಾರೆ. ಸುಬ್ರಮಣಿಯನ್ ಸ್ವಾಮಿ ಈ ಹಿಂದೆ ಹಲವು ಬಾರಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ನವೆಂಬರ್‌ನಲ್ಲಿ ಮೋದಿಯನ್ನು 'ಸುಳ್ಳುಗಾರ' ಎಂದು ಕರೆದಿದ್ದ ಸುಬ್ರಹ್ಮಣಿಯನ್ ಸ್ವಾಮಿ, 2014ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಪಡುವುದಾಗಿ ಹೇಳಿದ್ದರು.

Ads on article

Advertise in articles 1

advertising articles 2

Advertise under the article

ಸುರ