-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೇವಲ 35ರೂ.ಗಾಗಿ ನಡೆಯಿತು ಕೊಲೆ: 57ವರ್ಷಗಳ ಬಳಿಕ ಆರೋಪಿ ಅಂದರ್

ಕೇವಲ 35ರೂ.ಗಾಗಿ ನಡೆಯಿತು ಕೊಲೆ: 57ವರ್ಷಗಳ ಬಳಿಕ ಆರೋಪಿ ಅಂದರ್



ಕೋಟ: ಅಪರಾಧಿಗಳು ಕಾನೂನಿನ ಕೈಯಿಂದ ಎಷ್ಟೇ ಬಚಾವಾಗಲೂ ಯತ್ನಿಸಿದರೂ, ಅಪರಾಧ ಕೃತ್ಯದಲ್ಲಿ ತೊಡಗಿದವರು  ಒಂದಲ್ಲಾ ಒಂದು ದಿನ ಕಾನೂನು ಅವರನ್ನು ಹಿಡಿದೇ ಹಿಡಿಯುತ್ತದೆ. ಅದೇ ರೀತಿ ರಾಜಸ್ಥಾನ ಪೊಲೀಸರು 57 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ. 1967ರಿಂದಲೂ ತಲೆಮರೆಸಿಕೊಂಡಿದ್ದ ಈ ಆರೋಪಿ, ಹೊಸ ಗುರುತು ಹಾಗೂ ಬದಲಾದ ವೇಷದೊಂದಿಗೆ ರಾಜಧಾನಿ ನವದೆಹಲಿಯಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಬಳಿಕ ಕೋಟಾದಿಂದ ಪರಾಯಿಯಾಗಿ ದೆಹಲಿಯಲ್ಲಿ ನೆಲೆಸಿದ್ದ: 

ರಾಜಸ್ಥಾನದ ಕೋಟಾ ಜಿಲ್ಲೆಯ ಸುಕೇತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐವತ್ತೇಳು ವರ್ಷಗಳ ಹಿಂದೆ ಅಂದರೆ, 1967ರಲ್ಲಿ ಕೊಲೆಯೊಂದು ನಡೆದಿತ್ತು. ಕೊಲೆಯ ಆರೋಪಿ ಪ್ರಭು ಲಾಲ್, ಆಗ ಕೇವಲ 15 ವರ್ಷದವನಾಗಿದ್ದ. ಕೊಲೆಯ ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳಲು ರಾಜಸ್ಥಾನವನ್ನು ತೊರೆದು ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ. ಜೊತೆಗೆ ಅಲ್ಲಿ ತನ್ನ ಗುರುತನ್ನು ಬದಲಾಯಿಸಿಕೊಂಡಿದ್ದ. ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ನೆಲೆಸಿದ ಪ್ರಭುಲಾಲ್‌, ಮನೆ ನಿರ್ಮಾಣ ಕೆಲಸದ ಉದ್ಯೋಗ ಆರಂಭಿಸಿದ್ದು ಮಾತ್ರವಲ್ಲದೆ, ಸರ್ಕಾರದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರನೂ ಆಗಿದ್ದ.

35 ರೂ. ಜಗಳಕ್ಕೆ ಕೊಲೆ: 

ಸುಕೇತ್ ಠಾಣಾಧಿಕಾರಿ ಚೋಟು ಲಾಲ್ ಪ್ರಕಾರ, ಪ್ರಭು ಲಾಲ್ 1967ರಲ್ಲಿ ಕೇವಲ 35 ರೂ. ಹಣದ ಸಲುವಾಗಿ ಭವಾನ ದರ್ಜಿ ಎಂಬ ವ್ಯಕ್ತಿಯನ್ನು ಕೊಲೆಗೈದಿದ್ದ. ಈತ ಭವಾನ ದರ್ಜಿಗೆ 35 ರೂಪಾಯಿಗೆ ತನ್ನ ಸೈಕಲ್‌ಅನ್ನು ಮಾರಿದ್ದ. ಆದರೆ ಕೆಲ ದಿನಗಳ ಬಳಿಕ ಹಣ ಹಿಂದಿರುಗಿಸಿ ಸೈಕಲ್ ಅನ್ನು ಮರಳಿ ಕೇಳಿದ್ದ. ಪರಿಣಾಮ ಇಬ್ಬರ ನಡುವೆ ಜಗಳ ನಡೆದು ಕೋಪದಲ್ಲಿ ಪ್ರಭು ಲಾಲ್, ಭವಾನ ದರ್ಜಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ. ಘಟನೆಯ ಬಳಿಕ ಸ್ಥಳದಿಂದ ಪರಾರಿಯಾಗಿದ್ದ.

57 ವರ್ಷದ ಬಳಿಕ ಸಿಕ್ಕಿದ್ದು ಹೇಗೆ: 

ರಾಜಸ್ಥಾನ ಪೊಲೀಸರು ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಹಿಡಿಯಲು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಈ ಸಂದರ್ಭ ಪೊಲೀಸರಿಗೆ ಪ್ರಭು ಲಾಲ್ ದೆಹಲಿಯಲ್ಲಿ ವಾಸಿಸುತ್ತಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ. ಪೊಲೀಸರು ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ.

ಹೊಸ ಹೆಸರು, ಹೊಸ ಗುರುತು: 

ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಭು ಲಾಲ್ ತನ್ನ ಹೆಸರನ್ನು ಮಾತ್ರ ಬದಲಾಯಿಸಿದ್ದು ಮಾತ್ರವಲ್ಲ ತನ್ನ ಹಳ್ಳಿಗೆ ಎಂದಿಗೂ ಹಿಂತಿರುಗಿರಲಿಲ್ಲ. ಯಾರಿಗೂ ತನ್ನ ಬಗ್ಗೆ ಮಾಹಿತಿ ಸಿಗದಂತೆ ಯಾವುದೇ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿರಲಿಲ್ಲ. ಆದರೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಸಾಧ್ಯವಾಗಲಿಲ್ಲ ಮತ್ತು ಅಂತಿಮವಾಗಿ 72 ನೇ ವಯಸ್ಸಿನಲ್ಲಿ ಅವನು ಸಿಕ್ಕಿಬಿದ್ದ. ಈಗ ಅವನನ್ನು ರಾಜಸ್ಥಾನಕ್ಕೆ ಕರೆತಂದು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ

Ads on article

Advertise in articles 1

advertising articles 2

Advertise under the article

ಸುರ