-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಪಿಸ್ತೂಲ್ ಮಿಸ್ ಫೈರ್‌ನಿಂದ ಯುವಕನಿಗೆ ಗುಂಡೇಟು- ಪ್ರಕರಣ ದಾಖಲು

ಮಂಗಳೂರು: ಪಿಸ್ತೂಲ್ ಮಿಸ್ ಫೈರ್‌ನಿಂದ ಯುವಕನಿಗೆ ಗುಂಡೇಟು- ಪ್ರಕರಣ ದಾಖಲು



ಮಂಗಳೂರು: ಪಿಸ್ತೂಲ್ ಮಿಸ್ ಫೈರ್ ಆಗಿ ಯುವಕನೋರ್ವನಿಗೆ ಗುಂಡೇಟು ತಗುಲಿದ ಹಿನ್ನೆಲೆಯಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ.6ರಂದು ವಾಮಂಜೂರು ಬಳಿಯ ಸೆಕೆಂಡ್ ಹ್ಯಾಂಡ್ ಸೇಲ್ಸ್ ಬಝಾರ್‌‌ ಮಾಲಕ ಅದ್ದು ಅಲಿಯಾಸ್ ಬದ್ರುದ್ದೀನ್ (34) ಎಂಬಾತ ಪರವಾನಿಗೆ ಇಲ್ಲದ ಪಿಸ್ತೂಲ್ ಹೊಂದಿದ್ದ. ಈತ ತನ್ನ ಅಂಗಡಿಯಲ್ಲಿ ಕುಳಿತುಕೊಂಡು ಪಿಸ್ತೂಲ್ ಅನ್ನು ಪರೀಕ್ಷಿಸುತ್ತಿದ್ದ. ಈ ವೇಳೆ ಟ್ರಿಗ್ಗರ್ ಒತ್ತಿದ್ದಾನೆ. ಪರಿಣಾಮ ಫೈರ್ ಆಗ ಅಂಗಡಿಯಲ್ಲಿ ಕುಳಿತಿದ್ದ ಮೊಹಮ್ಮದ್ ಸಫ್ವಾನ್ (25) ಎಂಬಾತನಿಗೆ ಗುಂಡು ತಗುಲಿದೆ. ತಕ್ಷಣ ಗಾಯಾಳು ಸಫ್ವಾನ್‌ನನ್ನು ಜನಪ್ರಿಯ ಆಸ್ಪತ್ರೆಗೆ ರವಾನಿಸಲಾಗಿದೆ. 

 ಪರವಾನಿಗೆ ಇಲ್ಲದ ಪಿಸ್ತೂಲ್ ಅನ್ನು ಮೂಡುಶೆಡ್ಡೆ ನಿವಾಸಿ ಇಮ್ರಾನ್ ಎಂಬಾತ ಅದ್ದು ಅಲಿಯಾಸ್ ಬದ್ರುದ್ದೀನ್‌ನಿಗೆ ನೀಡಿದ್ದನು. ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ