ಪೆರ್ವಾಜೆ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದ 12ನೇ ಪ್ರತಿಷ್ಠಾ ವರ್ಧಂತ್ಯುತ್ಸವ

 



ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪೆರ್ವಾಜೆ ಶಾಸ್ತಾವಿನ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದ 12ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಶುಕ್ರವಾರ ನಡೆಯಿತು.




ಬೆಳಿಗ್ಗೆ ಗಂಟೆ 6-15ಕ್ಕೆ ದ್ವಾರ ಪೂಜೆ, ಬೆಳಿಗ್ಗೆ ಗಂಟೆ 6-45ಕ್ಕೆ  ಪ್ರಾತಃ ಪೂಜೆ ಬೆಳಿಗ್ಗೆ ಗಂಟೆ 9 ಕ್ಕೆ ಶ್ರೀ ಬಾಬಾರವರಿಗೆ ಕಲಶಾಭಿಷೇಕ, ಮಧ್ಯಾಹ್ನ ಗಂಟೆ 12-45ಕ್ಕೆ  ಮಹಾಪೂಜೆ ನಂತರ ಅನ್ನ ಸಂತರ್ಪಣೆ, ಸಂಜೆ ಗಂಟೆ 5ಕ್ಕೆ  ಸೇವಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮಗಳು ರಾತ್ರಿ ಗಂಟೆ 8 ಕ್ಕೆ ಮಹಾಪೂಜೆ ನಂತರ ಅನ್ನಸಂತರ್ಪಣೆ ನಡೆಯಿತು.





ಈ ಸಂದರ್ಭದಲ್ಲಿ  ಗೌರವ ಅಧ್ಯಕ್ಷ ಕೆ. ಕಮಲಾಕ್ಷ ಕಾಮತ್, ಆಡಳಿತ ಮೊಕ್ತೆಸರರಾದ  ಶ್ರೀಮತಿ ಲಲಿತಾ ಸುವರ್ಣ ಅಭಿಷೇಕ್ ಸುವರ್ಣ, ಪ್ರಧಾನ ಅರ್ಚಕ ಹಾಗೂ ವ್ಯವಸ್ಥಾಪಕರಾದ  ಲಕ್ಷ್ಮೀನಾರಾಯಣ ಭಟ್, ಪ್ರಪುಲ್ಲ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.






BREAKING NEWS
Loading latest news...
Join our WhatsApp Channel Powered By : Online Pudu