-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸುರತ್ಕಲ್: ಅರಂತಬೆಟ್ಟುಗುತ್ತು ಮಾರ್ಲ ಮನೆತನದ ಗಡಿಪ್ರಧಾನ ಕಾರ್ಯಕ್ರಮ, ಆಮಂತ್ರಣ ಪತ್ರಿಕೆ ಬಿಡುಗಡೆ-ಮೇ 4, 5 ರಂದು ಕಾರ್ಯಕ್ರಮ

ಸುರತ್ಕಲ್: ಅರಂತಬೆಟ್ಟುಗುತ್ತು ಮಾರ್ಲ ಮನೆತನದ ಗಡಿಪ್ರಧಾನ ಕಾರ್ಯಕ್ರಮ, ಆಮಂತ್ರಣ ಪತ್ರಿಕೆ ಬಿಡುಗಡೆ-ಮೇ 4, 5 ರಂದು ಕಾರ್ಯಕ್ರಮ

ಸುರತ್ಕಲ್: ಅರಂತಬೆಟ್ಟು ಗುತ್ತು ಶ್ರೀ ನಾಗದೇವರು ಶ್ರೀ ಉಳ್ಳಾಯ ಹಾಗೂ ಪರಿವಾರ ದೈವಗಳ ದೈವಸ್ಥಾನ ಇಲ್ಲಿ ಅರಂತಬೆಟ್ಟು ಗುತ್ತು ಮಾರ್ಲ ಮನೆತನದ ಗಡಿ ಸ್ವೀಕಾರ ಸಮಾರಂಭ ಮೇ 4 ರಂದು ಭಾನುವಾರ ಬೆಳಿಗ್ಗೆ 8.20 ಕ್ಕೆ  ಅರಂತಬೆಟ್ಟುಗುತ್ತುವಿನಲ್ಲಿ ನಡೆಯಲಿದೆ. ಸುರತ್ಕಲ್ ಮಧುಸೂದನ‌ ಮಯ್ಯರವರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸುರತ್ಕಲ್ ಕೊಡಿಪಾಡಿ ಬಾಳಿಕೆ ಹಾಗೂ ಪಡ್ರೆ ಚಾವಡಿಯ ಗಡಿ ಪ್ರಧಾನರುಗಳ ಉಪಸ್ಥಿತಿಯಲ್ಲಿ ಹಾಗೂ ಗೌರವಾನ್ವಿತ ಎಲ್ಲಾ ಗಡಿ ಪ್ರಧಾನರ ಸಮ್ಮುಖದಲ್ಲಿ ಅರಂತಬೆಟ್ಟು ಗುತ್ತು ಮಾರ್ಲ ಮನೆತನದ ನಿಡ್ಡೋಡಿ ಮೈಂದಡಿ ಸದಾನಂದ ಶೆಟ್ಟಿಯವರಿಗೆ  ಕಾಂತೇರಿ ಜುಮಾದಿಯ ಗಡಿ ಸ್ವೀಕಾರ ನಡೆಯಲಿದೆ. 

ಕಾರ್ಯಕ್ರಮಗಳು
ಮೇ 4 ಭಾನುವಾರ ಬೆಳಿಗ್ಗೆ 8.20 ಗಡಿ ಸ್ವೀಕಾರ, 10.30 ಕ್ಕೆ ಧರ್ಮರಸು ಉಳ್ಳಾಯ, ಕಾಂತೇರಿ ಜುಮಾದಿ ಹಾಗೂ ಪರಿವಾರ ದೈವಗಳ ಭಂಡಾರ ಇಳಿಸುವುದು, ನಂತರ ಧರ್ಮರಸು ಉಳ್ಳಾಯ ದೈವಕ್ಕೆ ನೇಮ, ಮಧ್ಯಾಹ್ನ‌1 ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿದೆ.
ಸಂಜೆ 6 ಕ್ಕೆ ಮೈಸಂದಾಯ ದೈವಕ್ಕೆ ನೇಮ, ರಾತ್ರಿ 8 ಕ್ಕೆ ಅನ್ನ ಸಂತರ್ಪಣೆ, ರಾತ್ರಿ 9 ಕ್ಕೆ ಕಾಂತೇರಿ ಜುಮಾದಿ ಹಾಗೂ ಭಂಟ, ಸರಳ ಜುಮಾದಿ ಹಾಗೂ ಭಂಟ ದೈವಗಳಿಗೆ ನೇಮ, ನಂತರ ಪಿಲಿಚಾಮುಂಡಿ ದೈವಕ್ಕೆ ನೇಮ‌ ನಡೆಯಲಿದೆ. 
ಮೇ 5 ರಂದು ರಾತ್ರಿ 8 ಕ್ಕೆ ಕಲ್ಲುರ್ಟಿ ಪಂಜುರ್ಲಿ ಹಾಗೂ ಜಾಗದ ಪಂಜುರ್ಲಿ ದೈವಗಳಿಗೆ ಕೋಲ ನಡೆಯಲಿದೆ.


ಆಮಂತ್ರಣ ಪತ್ರಿಕೆ ಬಿಡುಗಡೆ

ಗಡಿ ಸ್ವೀಕಾರ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಎ.18 ರಂದು ಅರಂತಬೆಟ್ಟು ಗುತ್ತುವಿನಲ್ಲಿ ನಡೆಯಿತು.
ಗಡಿ ಪ್ರಧಾನರಾದ ಬಾಬು ಬಂಡ್ರಿಯಾಲ್ ಪಡ್ರೆ,  ಜಗನ್ನಾಥ ಅತ್ತಾರ್ ಕೊಡಿಪಾಡಿ, ಮಧು ಮಯ್ಯ,  ರಮಾನಾಥ ರೈ, ಬಾಲಕೃಷ್ಣ ಶೆಟ್ಟಿ ಏಳಿಂಜೆ ಅಂಗಡಿಗುತ್ತು, ಪುಷ್ಪರಾಜ ಶೆಟ್ಟಿ ಕುಡುಂಬೂರು, ದಿನಕರ ಶೆಟ್ಟಿ ಪಡ್ರೆ, ದೇವೇಂದ್ರ ಪೂಜಾರಿ ಪಡ್ರೆ,  ಸದಾನಂದ ಶೆಟ್ಟಿ, ನವೀನ್ ಶೆಟ್ಟಿ ಪಡ್ರೆ, ಅರಂತ ಬೆಟ್ಟು ಗುತ್ತು ಮನೆತನದ ಮುದ್ದಣ್ಣ ಶೆಟ್ಟಿ, ನವೀನ್ ಶೆಟ್ಟಿ,   ಬಾಲಕೃಷ್ಣ ಶೆಟ್ಟಿ, ರಾಜೇಶ್ ಶೆಟ್ಟಿ, ದಿಲ್ ರಾಜ್ ಆಳ್ವ, ಪ್ರಶಾಂತ್ ಶೆಟ್ಟಿ, ಜ್ಯೋತಿ ಪ್ರಕಾಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article

ಸುರ