-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಯನ್ನು ಕೊಲೆಗೈದು ಫ್ರಿಡ್ಜ್‌ನಲ್ಲಿ ಇಡುವುದಾಗಿ ಇಮೇಲ್ ಬೆದರಿಕೆ ಸಂದೇಶ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಯನ್ನು ಕೊಲೆಗೈದು ಫ್ರಿಡ್ಜ್‌ನಲ್ಲಿ ಇಡುವುದಾಗಿ ಇಮೇಲ್ ಬೆದರಿಕೆ ಸಂದೇಶ


ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆಯೊಡ್ಡಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರಾಲಿ ಬ್ಯಾ‌ಗ್‌ನಲ್ಲಿ ತುಂಬಿಸಿ ಫ್ರಿಡ್ಜ್‌ನಲ್ಲಿ ಇಡುವುದಾಗಿ ಇಮೇಲ್ ಸಂದೇಶ ರವಾನಿಸಿದ್ದಾನೆ.

ಈ ಬಗ್ಗೆ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಸಿಂಧಾರ್ ರಜಪೂತ್ ಎಂಬ ಹೆಸರಿನ ಇಮೇಲ್ ವಿಳಾಸದಿಂದ ಈ ಸಂದೇಶ ರವಾನಿಸಲಾಗಿದೆ. ಸಂದೇಶ ರವಾನಿಸಿರುವ ವ್ಯಕ್ತಿಯನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದೊಂದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರಾಲಿ ಬ್ಯಾಗ್‌ಗೆ ತುಂಬಿ ಫ್ರಿಡ್ಜ್‌ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.

ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್‌ ಕಮಿಷನರ್ ಅವರಿಗೂ ಕಳಿಸಲಾಗಿದೆ. ಅಲ್ಲದೆ, ರಾಮಪುರದ ಪ್ರಭಾಕರ್‌ಗೆ ಒಂದು ಕೋಟಿ ರೂ. ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ತೀರಿಸಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲವಿಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article