-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಜಾಮರ್ ತೆಗೆಯುವಂತೆ ಜೈಲಿನ ಮುಂಭಾಗ ಬಿಜೆಪಿಯಿಂದ ಪ್ರತಿಭಟನೆ- ಶಾಸಕ ಕಾಮತ್ ಸೇರಿದಂತೆ ಬಿಜೆಪಿ‌ ಕಾರ್ಯಕರ್ತರು ವಶಕ್ಕೆ

ಮಂಗಳೂರು: ಜಾಮರ್ ತೆಗೆಯುವಂತೆ ಜೈಲಿನ ಮುಂಭಾಗ ಬಿಜೆಪಿಯಿಂದ ಪ್ರತಿಭಟನೆ- ಶಾಸಕ ಕಾಮತ್ ಸೇರಿದಂತೆ ಬಿಜೆಪಿ‌ ಕಾರ್ಯಕರ್ತರು ವಶಕ್ಕೆ


ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ ಅಳವಡಿಸಿರುವ ಜಾಮರ್ ತೆಗೆಯುವಂತೆ ಬಿಜೆಪಿ ವತಿಯಿಂದ ಜೈಲಿನ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಪ್ರತಿಭಟನಾಕಾರರನ್ನು  ವಶಪಡಿಸಿಕೊಂಡರು.

ಜಾಮರ್ ತೆಗೆಯಲು ಎಚ್ಚರಿಕೆ, ಮನವಿ ನೀಡಿದರೂ, ಯಾವುದೇ ಕ್ರಮ ಆಗಿಲ್ಲದಿದ್ದರಿಂದ ಬಿಜೆಪಿ ಶನಿವಾರ ರಾಸ್ತಾರೋಕ್ ನಡೆಸುವ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಇಂದು ಜೈಲಿನ ಮುಂಭಾಗ ಬ್ಯಾರಿಕೇಡ್ ಅಳವಡಿಸಿ ಮೂರು ಅಂತರಗಳಲ್ಲಿ ಪೊಲೀಸ್ ಭದ್ರತೆ ನಿಯೋಜಿಸಿ, ಪ್ರತಿಭಟನಾಕಾರರು ಜೈಲು ಪ್ರವೇಶಿಸದಂತೆ  ಮುನ್ನೆಚ್ಚರಿಕೆ ವಹಿಸಿತ್ತು. ಜೊತೆಗೆ ಜೈಲು ಆಸುಪಾಸಿನಲ್ಲಿ ಪೊಲೀಸ್ ಸರ್ಪಗಾವಲು ವ್ಯವಸ್ಥೆ ಅಳವಡಿಸಲಾಗಿತ್ತು. 

ರಾಸ್ತಾರೋಕ್ ಎಚ್ಚರಿಕೆ ನೀಡಲಾಗಿದ್ದರೂ ಜೈಲು ಮುಂಭಾಗ ಪ್ರತಿಭಟನೆಯಷ್ಟೇ ನಡೆಯಿತು. ಮೊದಲು ಶಾಸಕ ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ಮುಖಂಡ ರವಿಶಂಕರ್ ಮಿಜಾರು ಪ್ರತಿಭಟನಾ ಭಾಷಣ ಮಾಡಿದರು. ಬಳಿಕ ವೇದವ್ಯಾಸ ಕಾಮತ್ ಸೇರಿದಂತೆ ಕೆಲ ಪ್ರತಿಭಟನಾಕಾರರು ಮೊಬೈಲ್‌ಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿ,  ಜಾಮರ್ ಕಿತ್ತೆಸೆಯುತ್ತೇವೆ ಎಂದು ಜೈಲಿನೊಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡು ಪೊಲೀಸ್ ವಾಹನದಲ್ಲಿ ಕೊಂಡೊಯ್ದರು.

Ads on article

Advertise in articles 1

advertising articles 2

Advertise under the article

ಸುರ