-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಳ್ತಂಗಡಿ: ತಿಮರೋಡಿ ಚಾಲೆಂಜ್ ಸ್ವೀಕರಿಸಿ ಉಜಿರೆಗೆ ಬಂದ ಪುನೀತ್ ಕೆರೆಹಳ್ಳಿ- ಅರ್ಧದಲ್ಲೇ ತಡೆದು ಹಿಂದೆ ಕಳಿಸಿದ ಪೊಲೀಸರು

ಬೆಳ್ತಂಗಡಿ: ತಿಮರೋಡಿ ಚಾಲೆಂಜ್ ಸ್ವೀಕರಿಸಿ ಉಜಿರೆಗೆ ಬಂದ ಪುನೀತ್ ಕೆರೆಹಳ್ಳಿ- ಅರ್ಧದಲ್ಲೇ ತಡೆದು ಹಿಂದೆ ಕಳಿಸಿದ ಪೊಲೀಸರು


ಬೆಳ್ತಂಗಡಿ: ಸೌಜನ್ಯಪರ ಹೋರಾಟಗಾರ ಮಹೇಶ್ ತಿಮರೋಡಿಯವರ ಚಾಲೆಂಜ್ ಅನ್ನು ಸ್ವೀಕರಿಸಿ ಉಜಿರೆಗೆ ಬಂದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಅರ್ಧದಲ್ಲೇ ತಡೆದು ಹಿಂದೆ ಕಳುಹಿಸಿರುವ ಘಟನೆ ನಡೆದಿದೆ.

ಶನಿವಾರ ಸಂಜೆ ಉಜಿರೆಯಲ್ಲಿ ನಡೆಯುವ ರಾಮೋತ್ಸವ ಕಾರ್ಯಕ್ರಮಕ್ಕೆ ಪುನೀತ್ ಕೆರೆಹಳ್ಳಿ ಆಗಮಿಸುತ್ತಿದ್ದರು. ಆದರೆ ದ.ಕ ಜಿಲ್ಲಾ ಪ್ರವೇಶಕ್ಕೆ ದ.ಕ.ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದರು‌. ಪುನೀತ್ ಕೆರೆಹಳ್ಳಿ ಆಗಮನದಿಂದ ಜಿಲ್ಲೆಯಲ್ಲಿ ಶಾಂತಿ ಕದಡುವ ಸಾಧ್ಯವಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ನಿರ್ಬಂಧ ವಿಧಿಸಿದ್ದರು.

ಸೌಜನ್ಯಪರ ಹೋರಾಟ ವಿಚಾರದಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಧ್ಯೆ ಸಂಘರ್ಷ ಏರ್ಪಟ್ಟಿತ್ತು. ಆದ್ದರಿಂದ ತಿಮರೋಡಿ ಬಣ 'ಪುನೀತ್ ಕೆರೆಹಳ್ಳಿಗೆ ತಾಕತ್ತಿದ್ದರೆ ಉಜಿರೆ ಬರುವಂತೆ ಚಾಲೆಂಜ್ ಹಾಕಿತ್ತು'. ಸವಾಲು ಸ್ವೀಕರಿಸಿ ಉಜಿರೆಗೆ ಆಗಮಿಸಿದ್ದ ಪುನೀತ್ ಕೆರೆಹಳ್ಳಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಬಣ ನಡುವೆ ಸಂಘರ್ಷ ಸಾಧ್ಯತೆಯ ಹಿನ್ನೆಲೆಯಲ್ಲಿ ‌ಮುನ್ನೆಚ್ಚರಿಕಾ ಕ್ರಮವಾಗಿ ಪುನೀತ್ ಕೆರೆಹಳ್ಳಿಗೆ ನಿರ್ಬಂಧ ವಿಧಿಸಿತ್ತು.

ಆದ್ದರಿಂದ ಪುನೀತ್ ಕೆರೆಹಳ್ಳಿಗೆ ಉಜಿರೆ ಪ್ರವೇಶಿಸುವ ದಾರಿ ಮಧ್ಯೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದೆ‌. ಆಗ ಪೊಲೀಸರು ಮತ್ತು ಪುನೀತ್ ಕೆರೆಹಳ್ಳಿ ಬೆಂಬಲಿಗರ ಮಧ್ಯೆ ವಾಗ್ವಾದ ಉಂಟಾಗಿದೆ. ಸದ್ಯ ಪುನೀತ್ ಕೆರೆಹಳ್ಳಿಗೆ ಪೊಲೀಸರು ನೊಟೀಸ್ ನೀಡಿ ನೆಲ್ಯಾಡಿ ಶಿರಾಡಿ ಘಾಟ್ ಮೂಲಕ ವಾಪಸ್ ಕಳುಹಿಸಿದೆ.

Ads on article

Advertise in articles 1

advertising articles 2

Advertise under the article

ಸುರ