-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಳ್ತಂಗಡಿ: ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ- ಕೊಲೆ ಶಂಕೆ

ಬೆಳ್ತಂಗಡಿ: ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ- ಕೊಲೆ ಶಂಕೆ


ಬೆಳ್ತಂಗಡಿ: ಯುವಕನೋರ್ವನು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನೆಲ್ಯಾಡಿಯಲ್ಲಿ ನಡೆದಿದೆ.

ಶರತ್ (34) ಅನುಮಾನಾಸ್ಪದವಾಗಿ ಮೃತಪಟ್ಟ ಯುವಕ.

ಕೂಲಿ ಕೆಲಸ ಮಾಡುತ್ತಿರುವ ಶರತ್ ಶುಕ್ರವಾರ ರಾತ್ರಿ ತನ್ನ ಚಿಕ್ಕಪ್ಪನ ಮನೆಗೆ ಹೋಗಿದ್ದ. ಅಲ್ಲಿ ಮನೆಮಂದಿಯೊಂದಿಗೆ ಜಗಳವಾಗಿದೆ ಎನ್ನಲಾಗಿದೆ. ಬಳಿಕ ಮನೆಯ ಅಂಗಳದಲ್ಲಿ ಶರತ್ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತನ ತಲೆಯಲ್ಲಿ ಗಾಯದ ಗುರುತುಗಳಾಗಿದೆ ಎಂದು ತಿಳಿದು ಬಂದಿದೆ.

ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಮಹಜರು ನಡೆಸಲು ಮೃತದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಪ್ರಕರಣದ ಕುರಿತು ನಿಖರ ಮಾಹಿತಿ ತಿಳಿದು ಬರಬೇಕಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ