ರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಬಹಿಷ್ಕರಿಸಬೇಕು- ಸ್ವಾಮಿ ಅವಿಮುಕ್ತಶ್ವರಾನಂದ
Tuesday, May 6, 2025
ಡೆಹ್ರಾಡೂನ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಬಹಿಷ್ಕರಿಸಬೇಕು ಎಂದು ಜ್ಯೋತಿರ್ಮಠ ಶಂಕರಾಚಾರ್ಯ ಸ್ವಾಮಿ ಅವಿಮುಕ್ತಶ್ವರಾನಂದ ಸರಸ್ವತಿ ಆಗ್ರಹಿಸಿದ್ದಾರೆ.
ಕೆಲವು ತಿಂಗಳುಗಳ ಹಿಂದೆ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮನುಸ್ಮೃತಿ ಬಗ್ಗೆ ಮಾತನಾಡಿ ಸನಾತನ ಧರ್ಮಕ್ಕೆ ಅವಮಾನಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ಕೇಳಿದ್ದರೂ ಅದಕ್ಕೆ ಪ್ರತಿಕ್ರಿಯೆ ನೀಡಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.
ಬದರೀನಾಥದ ಶಂಕರಾಚಾರ್ಯ ಮಠದಿಂದ ಈ ಬಗ್ಗೆ ಪ್ರಕಟನೆ ನೀಡಿರುವ ಶ್ರೀಗಳು "ಮನುಸ್ಮೃತಿಯು ಅತ್ಯಾಚಾರ ಅಪರಾಧಿಗಳನ್ನು ರಕ್ಷಿಸುತ್ತವೆ" ಎಂದಿರುವ ರಾಹುಲ್ಗೆ ಸನಾತನ ಧರ್ಮದ ಮೇಲೆ ನಂಬಿಕೆಯಿಲ್ಲ. ಹಾಗಿದ್ದಾಗ ಅವರನ್ನು ಬಹಿಷ್ಕರಿಸುವುದೇ ಒಳಿತು. ದೇವಾಲಯಗಳಲ್ಲಿ ಅವರಿಗೆ ಪ್ರವೇಶ ನಿಷೇಧಿಸಿ' ಎಂದಿದ್ದಾರೆ.