-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸಾಣೂರು : ಬಸ್ಸು ತಂಗುದಾಣವಿಲ್ಲದೆ ಸುಡುಬಿಸಿಲಿಗೆ ರಸ್ತೆಯಲ್ಲಿಯೇ ಕಾದು ಹೈರಾಣವಾಗಿರುವ ಜನತೆ…!!

ಸಾಣೂರು : ಬಸ್ಸು ತಂಗುದಾಣವಿಲ್ಲದೆ ಸುಡುಬಿಸಿಲಿಗೆ ರಸ್ತೆಯಲ್ಲಿಯೇ ಕಾದು ಹೈರಾಣವಾಗಿರುವ ಜನತೆ…!!


 ವರದಿ : ಅರುಣ್ ಭಟ್ ಕಾರ್ಕಳ

ಕಾರ್ಕಳ : ರಾ.ಹೆ 169  ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕು ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ರಸ್ತೆ ಅಗಲೀಕರಣಕ್ಕಾಗಿ ಈ ಹಿಂದೆ ಇದ್ದ ಸುಸಜ್ಜಿತ ಬಸ್ಸು ತಂಗುದಾಣ ಕೆಡವಿ ಎರಡು ವರ್ಷಗಳಿಂದ ಪ್ರಯಾಣಿಕರು ರಸ್ತೆ ಮಧ್ಯದಲ್ಲಿಯೇ ಅಪಾಯಕಾರಿ ಸ್ಥಿತಿಯಲ್ಲಿ ಸುಡು ಬಿಸಿಲಿಗೆ ಬಸ್ಗಾಗಿ ಕಾಯುವ  ಪರಿಸ್ಥಿತಿ ಎದುರಾಗಿದೆ

ಹೊಸ ಬಸ್ ನಿಲ್ದಾಣ ನಿರ್ಮಾಣಕ್ಕೆ ಇನ್ನೂ ಕೂಡ ಯಾವುದೇ ಸ್ಥಳವನ್ನು ಅಂತಿಮಗೊಳಿಸಿಲ್ಲ.ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಈ ಬೇಜಾಬ್ದಾರಿ ವರ್ತನೆಗೆ ಜನಪ್ರತಿನಿಧಿಗಳು ಇನ್ನೂ ಯಾಕೆ ಸ್ಪಂದಿಸುತ್ತಿಲ್ಲ.

ಈ ಹಿಂದೆ ಹಲವಾರು ಬಾರಿ ಪತ್ರಿಕೆಗಳಲ್ಲಿ ,ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರು ,ಸಂಸದರು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆಗೆ ಬಂದಾಗ ಸಾರ್ವಜನಿಕರು ಈ ಬಗ್ಗೆ ಗಮನಕ್ಕೆ ತಂದರೂ ಹೆದ್ದಾರಿ ಇಲಾಖೆಗೆ ಶೀಘ್ರವಾಗಿ ಬಸ್ಸು ತಂಗುದಾಣ ನಿರ್ಮಾಣ ಮಾಡಲು ಯಾಕೆ ಇನ್ನೂ ಒತ್ತಡ ಹೇರುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ ಪ್ರತಿ ದಿನ ಸುಡು ಬಿಸಿಲಿನಲ್ಲಿ ಕಾದು ಕರಟಿ ಹೋಗಿ ಜನಪ್ರತಿನಿಧಿಗಳಿಗೆ ಹೆದ್ದಾರಿ ಇಲಾಖೆಯವರಿಗೆ ಜನ ಶಾಪ ಹಾಕುತ್ತಿದ್ದಾರೆ

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article