-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಎನ್ಎಸ್‌ಯುಐ ದ.ಕ.ಜಿಲ್ಲಾ ಉಪಾಧ್ಯಕ್ಷ ಸೇರಿ ಇಬ್ಬರು ಸಾವು

ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಎನ್ಎಸ್‌ಯುಐ ದ.ಕ.ಜಿಲ್ಲಾ ಉಪಾಧ್ಯಕ್ಷ ಸೇರಿ ಇಬ್ಬರು ಸಾವು


ಮಂಗಳೂರು: ನಗರದ ಜಪ್ಪಿನಮೊಗರು ಬಳಿ ಮಂಗಳವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎನ್ಎಸ್‌ಯುಐ ದ.ಕ.ಜಿಲ್ಲಾ ಉಪಾಧ್ಯಕ್ಷ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. 

ಎನ್ಎಸ್‌ಯುಐ ದ.ಕ.ಜಿಲ್ಲಾ ಉಪಾಧ್ಯಕ್ಷ, ದೇರೆಬೈಲ್ ನಿವಾಸಿ ಓಂ ಶ್ರೀ ಪೂಜಾರಿ(24) ಹಾಗೂ ಅಮನ್ ರಾವ್(23) ಎಂಬವರು ಮೃತಪಟ್ಟವರು.


ಓಂ ಶ್ರೀ ಪೂಜಾರಿ ಹಾಗೂ ಉಳಿದ ನಾಲ್ವರು ಸ್ನೇಹಿತರು ಮಂಗಳವಾರ ತಡರಾತ್ರಿ 2ಗಂಟೆ ಸುಮಾರಿಗೆ ತಲಪಾಡಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದರು‌. ಜಪ್ಪಿನಮೊಗರುವಿಗೆ ಬರುತ್ತಿದ್ದಂತೆ ಚಾಲಕ ಅಮನ್ ರಾವ್ ಅವರ ನಿಯಂತ್ರಣ ತಪ್ಪಿ ಡಿವೈಡರ್ ಏರಿ ಪಲ್ಟಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಕಾರು ಚಾಲಕನ ಸೀಟ್‌ನಲ್ಲಿದ್ದ ಅಮನ್ ರಾವ್ ಹಾಗೂ ಚಾಲಕನ ಹಿಂಭಾಗದ ಸೀಟ್‌ನಲ್ಲಿದ್ದ ಓಂ ಶ್ರೀ ಪೂಜಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಕಾರಿನಲ್ಲಿ ಮತ್ತೆ ಮೂವರಿದ್ದು, ಅಪಘಾತದಲ್ಲಿ ಓರ್ವನ ಬೆನ್ನು ಮೂಳೆ ಮುರಿದಿದ್ದು, ಮತ್ತೋರ್ವರ ಕಾಲು ಮುರಿತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವ ಇಟಲಿಯನ್ ಪ್ರಜೆಯಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಸದ್ಯ ಮೃತದೇಹವನ್ನು ಎ.ಜೆ.ಆಸ್ಪತ್ರೆಗೆ ರವಾನಿಸಲಾಗಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article