-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಂಟ್ವಾಳ: ಸೀಮಂತ ನಿಗದಿಯಾಗಿದ್ದ ಗರ್ಭಿಣಿಯ ಕೊಂದು ಪತಿ ಆತ್ಮಹತ್ಯೆ

ಬಂಟ್ವಾಳ: ಸೀಮಂತ ನಿಗದಿಯಾಗಿದ್ದ ಗರ್ಭಿಣಿಯ ಕೊಂದು ಪತಿ ಆತ್ಮಹತ್ಯೆ

ಮಂಗಳೂರು: ಸೀಮಂತದ ದಿನ ನಿಗದಿಯಾಗಿದ್ದ ಗರ್ಭಿಣಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಬಡಗುಂಡಿಯಲ್ಲಿ ನಡೆದಿದೆ.

ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಪತ್ನಿ ಜಯಂತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ದಂಪತಿ. ತಿಮ್ಮಪ್ಪ ಮೂಲ್ಯರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದರೆ, ಅವರ ಪತ್ನಿ ಜಯಂತಿ ಮೃತದೇಹ ಬೆಡ್ ಮೇಲೆ ಬಿದ್ದಿದ್ದು ಮೃತದೇಹದ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿವೆ. ಪತ್ನಿಯನ್ನು ಕೊಲೆಗೈದು ಪತಿ ನೇಣಿಗೆ ಶರಣಾಗಿದ್ದಾರೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ತಿಮ್ಮಪ್ಪ ಮೂಲ್ಯರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ತವರು ಮನೆ ಬಡಾಗುಂಡಿಯಲ್ಲಿದೆ. ಕಳೆದ 15 ವರ್ಷಗಳ ಹಿಂದೆ ವಿವಾಹವಾಗಿದ್ದ ಇವರಿಗೆ, ಈವರೆಗೆ ಮಕ್ಕಳಾಗಿರಲಿಲ್ಲ. ಸದ್ಯ ಪತ್ನಿ ಜಯಂತಿ ಗರ್ಭಿಣಿಯಾಗಿದ್ದು, ಜು.2ಕ್ಕೆ ಸೀಮಂತದ ದಿನಾಂಕವೂ ನಿಗದಿಯಾಗಿತ್ತು. ಇದೀಗ ತಿಮ್ಮಪ್ಪ ಮೂಲ್ಯರೇ ತಮ್ಮ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್‌ಸ್ಪೆಕ್ಟರ್ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article