-->

 ಕಾರ್ಕಳದಲ್ಲಿ ರಾಮಾಯಣ ಉಪನ್ಯಾಸ ಮಾಲೆ

ಕಾರ್ಕಳದಲ್ಲಿ ರಾಮಾಯಣ ಉಪನ್ಯಾಸ ಮಾಲೆ



ಕೈಕೇಯಿಯ ಮಾತಿನಂತೆ ತಂದೆಯ ವಚನ ಪರಿಪಾಲನೆಗಾಗಿ ಧೃಡವಾದ ನಿರ್ಧಾರ ತೆಗೆದುಕೊಂಡ ರಾಮನು ವನವಾಸಕ್ಕೆ ತೆರಳಲು ಸಿದ್ಧನಾಗುತ್ತಾನೆ. ರಾಮನಿಲ್ಲದ ಅಯೋಧ್ಯೆಯಲ್ಲಿ  ನಾನಿರಲಾರೆ. ರಾಮನಿರುವ ಪ್ರದೇಶವೇ ನನಗೆ ಅಯೋಧ್ಯೆ. ನಾನು ಬಯಸಿದ್ದು ರಾಮನನ್ನೇ ವಿನಹಾ ಅಯೋಧ್ಯೆಯನ್ನಲ್ಲ ಎನ್ನುತ್ತಾ ಸೀತೆಯೂ ವನವಾಸ ಕ್ಕೆ ರಾಮನೊಂದಿಗೆ ತೆರಳಲು ಸಿದ್ಧಳಾದಾಗ ರಾಮನ ನೆರಳಿನಂತೆ ಇದ್ದ ಲಕ್ಷ್ಮಣನೂ ರಾಮನೊಂದಿಗೆ ಸೇರಿಕೊಳ್ಳುತ್ತಾನೆ ಎಂಬುದಾಗಿ ಸ್ವಾರಸ್ಯಕರವಾದ ಉಪಕತೆಗಳೊಂದಿಗೆ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರಿಯವರು ತಮ್ಮ ಉಪನ್ಯಾಸದಲ್ಲಿ ಪ್ರಸ್ತುತ ಪಡಿಸಿದರು.

    ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ ೨೦೨೫ರ ವರ್ಷ ಪ್ರತೀ ತಿಂಗಳು ರಾಮಸಾಗರಗಾಮಿನೀ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸವನ್ನು ಹಮ್ಮಿಕೊಂಡಿದ್ದು ಮಾಲೆಯ ಸಪ್ತಮ ಸೋಪಾನ ಚಿತ್ರಕೂಟದ ಚಿತ್ರ ಎಂಬ ವಿಷಯದ ಕುರಿತು ಜುಲೈ ೧೯ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ಅವರು ಉಪನ್ಯಾಸ ನೀಡಿದರು.

   ಇಡೀ ಅಯೋಧ್ಯೆ ರಾಮನನ್ನು ಪರಿಪರಿಯಾಗಿ ಬೇಡಿಕೊಂಡರೂ ರಾಮ ತನ್ನ ನಿರ್ಧಾರವನ್ನು ಬದಲಿಸದೆ ವನವಾಸಕ್ಕೆ ತೆರಳಿದ. ಸಮತಾ, ಗೋಮತಿ ನದಿಗಳನ್ನು ದಾಟಿ ಬಾಲ್ಯ ಸ್ನೇಹಿತ ಗುಹನು ಭೆಟಿಯಾಗಿ ಅರಮನೆಗೆ ಬರುವಂತೆ ಬೇಡಿಕೊಂಡರೂ ಅಲ್ಲಿಗೆ ಹೋಗದೆ ರಾತ್ರಿ ನದಿ ತಟದಲ್ಲಿಯೇ ಕಳೆದು ಮರುದಿನ ಅವರು ಚಿತ್ರಕೂಟ ಪರ್ವತದೆಡೆಗೆ ಪ್ರಯಾಣ ಮುಂದುವರಿಸುತ್ತಾರೆ ಎಂಬುದನ್ನು ಅವರು ಆಕರ್ಷಕವಾಗಿ ವಿವರಿಸಿದರು.

   ಡಾ.ನಾ.ಮೊಗಸಾಲೆ, ನಿತ್ಯಾನಂದ ಪೈ, ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಮತ್ತು ಮಿತ್ರಪ್ರಭಾ ಹೆಗ್ಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೀರ್ತನಕಾರರಾದ ವೈ ಅನಂತ ಪದ್ಮನಾಭ ಭಟ್  ಪ್ರಾರ್ಥಿಸಿದರು. ಸುಲೋಚನಾ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಮಾಲತಿ ವಸಂತರಾಜ್ ವಂದಿಸಿದರು

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article