-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ



ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ಎನ್‌ಡಿಎ (ನ್ಯಾಷನಲ್ ಡಿಫೆನ್ಸ್ ಅಕಾಡೆಮಿ) ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.  

 ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದ ಖ್ಯಾತ ವೈದ್ಯ ಹಾಗೂ ಅಂಕಣಕಾರ ಮೇಜರ್ ಡಾ ಕುಶವಂತ್ ಕೋಳಿಬೈಲು ಪಿಯು ಮಟ್ಟದಲ್ಲಿ ಈ ಕೋರ್ಸ್ನ ಕುರಿತು ಅರಿವು ಇರುವುದು ಬಹಳ ಮುಖ್ಯ.  ಪದವಿಪೂರ್ವ ಹಂತವನ್ನು ಮುಗಿಸಿದ ನಂತರವೇ ವಿದ್ಯಾರ್ಥಿಗಳು ಎನ್‌ಡಿಎ ಪ್ರವೇಶ ಪರೀಕ್ಷೆ ಬರೆಯಲು ಅರ್ಹರಾಗುತ್ತಾರೆ. ಇದಕ್ಕೆ ತಯಾರಿ ಈಗಲೇ ಆರಂಭಿಸಿದರೆ, ಭವಿಷ್ಯದಲ್ಲಿ ನಮ್ಮ ದೇಶದ ರಕ್ಷಕರಾಗುವ ಅವಕಾಶ ನಮ್ಮ ಕೈಯಲ್ಲಿರಲಿದೆ ಎಂದರು.

ಎನ್‌ಡಿಎ ಕೇವಲ ಉದ್ಯೋಗವಲ್ಲ – ಅದು ದೇಶ ಸೇವೆಯ ಕನಸು ಹಾಗೂ ಪ್ರತಿಷ್ಠೆಯ ಕಾಯಕ. ಎನ್‌ಡಿಎ ಪರೀಕ್ಷೆಗಳು ವರ್ಷಕ್ಕೆ ಎರಡು ಭಾರಿ ನಡೆಯುತ್ತಿದ್ದು, ಕುಬ್ಜ ವ್ಯಕ್ತಿಗಳು ಪರೀಕ್ಷೆ ಎದುರಿಸಬಹುದು ಎಂದು ತಿಳಿಸಿದರು. ನಮ್ಮ ಭವಿಷ್ಯದ ಬಗ್ಗೆ ಬೇರೆಯವರು ನಿರ್ಧಾರ ತೆಗೆದುಕೊಳ್ಳಲು ಬದಲು ನಾವೇ ನಮ್ಮ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಳ್ವಾಸ್ ಪಿಯು ಕಾಲೇಜಿನ ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್ ಮಾತನಾಡಿ ನಿರ್ಧಿಷ್ಟ ಸಮಯದಲ್ಲಿ ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳುವುದರಿಂದ ಜೀವನದಲ್ಲಿ  ಗರಿಷ್ಠ ಲಾಭವನ್ನು ಪಡೆದುಕೊಳ್ಳಬಹುದು.  ವಿದ್ಯಾರ್ಥಿಗಳು ತಮ್ಮ ಗುರಿಯ ಕಡೆ ಗಮನಹರಿಸಿ ಇಂದಿನಿAದಲೇ ಕಾರ್ಯವನ್ನು ಆರಂಭಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ.   “ನಾನು ಸೈನ್ಯಕ್ಕೆ ಸೇರುತ್ತೇನೆ ಯುದ್ಧದಲ್ಲಿ ಗೆದ್ದರೆ ಭಾರತದ ಧ್ವಜ ನನ್ನ ಹೆಗಲೆರುತ್ತದೆ, ಯುದ್ಧದಲ್ಲಿ ಮಡಿದರೆ ಅದೇ ಧ್ವಜ ನನ್ನ ದೇಹದ ಮೇಲಿರುತ್ತದೆ ಎಂದು ಹೆಮ್ಮೆಯ ನುಡಿಗಳನ್ನಾಡಿದ ವಿಕ್ರಂ ಭಾತ್ರಾರ ಮಾತುಗಳನ್ನು ಪುನರುಚ್ಛರಿಸಿದರು.

ಎನ್‌ಡಿಎ ಪರೀಕ್ಷೆಗಳ ಸಂಯೋಜಕ ದೇವಿಪ್ರಸಾದ್ ಮಾತನಾಡಿ ಒಂದು ದಿನದ ಪ್ರವಾಸಕ್ಕೆ ಯೋಜನೆ ರೂಪಿಸುವ ಆಸಕ್ತಿಯನ್ನು, ನಮ್ಮ ಒಂದು ವರ್ಷದ  ಶಿಕ್ಷಣಕ್ಕೆ ತೋರಿಸಿದರೆ ಅಂದುಕೊAಡ ಹಾಗೆ ಗೆಲುವು ಸಾಧಿಸಲು ಸಾಧ್ಯ ಎಂದರು.
ಸAಯೋಜಕ ವರುಣ್ ಪ್ರಭು ಇದ್ದರು.  ಇಂಗ್ಲೀಷ್ ಉಪನ್ಯಾಸಕಿ ದೀಪಾಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

Ads on article

Advertise in articles 1

advertising articles 2

Advertise under the article