-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.)    ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ



ಮಂಗಳೂರು : ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ.


     ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು ಸತತ ಲಾಭ ಗಳಿಕೆಯೊಂದಿಗೆ, ಸದಸ್ಯರಿಗೆ ಸತತ 20% ಡಿವಿಡೆಂಡ್ ನೀಡುತ್ತಾ ಬರುತ್ತಿದೆ. ಸರ್ಕಾರದ ಅಡಿಟ್ ವರ್ಗೀಕರಣದಲ್ಲಿ ಸತತ ‘ಎ’ ವರ್ಗ ಪಡೆಯುವುದರೊಂದಿಗೆ ಉತ್ತಮ ಅಭಿವೃದ್ಧಿಗೆ ಎಸ್ ಡಿ ಸಿ ಸಿ ಬ್ಯಾಂಕ್ ಸಾಧನ ಪ್ರಶಸ್ತಿಯನ್ನು ಸತತ ಪಡೆಯುತ್ತಾ ಬರುತ್ತಿದೆ.


    ಎಲ್ಲಾ ಶಾಖೆಗಳು ಕಂಪ್ಯೂಟರಿಕೃತ ಲೆಕ್ಕಪತ್ರವ್ಯವಸ್ಥೆ ಎಲ್ಲಾ ಭದ್ರತಾ ವ್ಯವಸೆಗಳೊಂದಿಗೆ ಗ್ರಾಹಕರಿಗೆ ಉತ್ತಮ ಬ್ಯಾಂಕಿAಗ್ ಸೇವೆ ನೀಡುತ್ತಾ ಬರುತ್ತಿದೆ. ಬೆಳ್ತಂಗಡಿ ಶಾಖೆಯು ಆರಂಭದ ಕೊಡುಗೆಯಾಗಿ ಸಾಮಾನ್ಯ ಠೇವಣಿ 1 ವರ್ಷಕ್ಕೆ 8.50%, 2 ವರ್ಷಕ್ಕೆ 9%, 3 ವರ್ಷಕ್ಕೆ 9.50% ಹಾಗೂ ಹಿರಿಯ ನಾಗರಿಕರಿಗೆ 1 ವರ್ಷಕ್ಕೆ 9%, 2 ವರ್ಷಕ್ಕೆ 9.50%, 3 ವರ್ಷಕ್ಕೆ 10% ನೀಡುತ್ತಿದ್ದು ಗ್ರಾಹಕ ಬಂಧುಗಳು ಕೆಲವೇ ದಿನಗಳ ಅವಧಿ ನೀಡುವ ಈ ಕೊಡುಗೆಯ ಸದುಪಯೋಗ ಪಡೆದುಕೊಳ್ಳಲು  ಸೊಸೈಟಿಯ  ಪ್ರಕಟಣೆಯಲ್ಲಿ ಕೋರಲಾಗಿದೆ.

Ads on article

Advertise in articles 1

advertising articles 2

Advertise under the article