-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಐಕಳ ಹರೀಶ್ ಶೆಟ್ಟಿ ಅವರಿಗೆ ಶಿವಗಿರಿ ಸಮ್ಮಾನ್ ಪ್ರಶಸ್ತಿ

ಐಕಳ ಹರೀಶ್ ಶೆಟ್ಟಿ ಅವರಿಗೆ ಶಿವಗಿರಿ ಸಮ್ಮಾನ್ ಪ್ರಶಸ್ತಿ



ಮಂಗಳೂರು: ಜಯ ಸುವರ್ಣ ಸಂಸ್ಮರಣೆಯ ಅಂಗವಾಗಿ ಜಯ ಸಿ ಸುವರ್ಣ ಜನಸೇವಾ ಪುರಸ್ಕಾರ ಶಿವಗಿರಿ ಸಮ್ಮಾನ್ ಪ್ರಶಸ್ತಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಸೆಪ್ಟಂಬರ್ 7 ರಂದು ಭಾನುವಾರ ಮುಂಬಯಿಯ ಜಯಲೀಲಾ ಬ್ಯಾಂಕ್ವೆಟ್ ಹಾಲ್ ಗೋರೆಗಾಂವ್ ಪೂರ್ವ ಇಲ್ಲಿ ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ಆಯೋಜಿಸಿರುವ 171 ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಐಕಳ ಹರೀಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುತ್ತದೆ.

 ಐಕಳ ಹರೀಶ್ ಶೆಟ್ಟಿ ಅವರು ವಿಶ್ವಮಟ್ಟದಲ್ಲಿ ಸಮಾಜಸೇವೆಯ ಮೂಲಕ ಗುರುತಿಸಿಕೊಂಡವರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಜೊತೆಗೆ ನೂರಕ್ಕೂ‌ ಮಿಕ್ಕಿದ ಸನ್ಮಾನ, ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ ಐಕಳ ಅವರ ಸಮಾಜ ಸೇವೆ, ಸಂಘಟನಾ ಚತುರತೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Ads on article

Advertise in articles 1

advertising articles 2

Advertise under the article