ವಿಶೇಷ ಚೇತನೆ ಮೇಲೆ ಅತ್ಯಾಚಾರಕ್ಕೆ ಯತ್ನ: ಗಾಂಜಾ ನಶೆಯಲ್ಲಿದ್ದ ಕಾಮುಕನಿಗೆ ಬಿತ್ತು‌ ಧರ್ಮದೇಟು



ಬೆಂಗಳೂರು: ಗಾಂಜಾ ನಶೆಯಲ್ಲಿದ್ದ ಕಾಮುಕನೋರ್ವನು ಕಾಲು ಸ್ವಾಧೀನವಿಲ್ಲದ, ಮಾತು ಬಾರದ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿಘ್ನೇಶ್ ಅಲಿಯಾಸ್​​ ದಾಡು ಎಂಬಾತ ಕೃತ್ಯ ಎಸಗಿರುವ, ಆರೋಪಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ನವೆಂಬರ್​ 9ರಂದು ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.


ಮದುವೆಗೆಂದು ಮನೆಮಂದಿ ವಿಶೇಷ ಚೇತನ ಯುವತಿಯನ್ನು ಮನೆಯಲ್ಲೇ ಬಿಟ್ಟು ಹೋಗಿದ್ದರು. ಬೆಳಗ್ಗೆ 11ಗಂಟೆ ಸುಮಾರಿಗೆ ಬಂದ ಗಾಂಜಾ ನಶೆಯಲ್ಲಿದ್ದ ಆರೋಪಿ ವಿಘ್ನೇಶ್, ಚಿಲಕ ಹಾಕಿದ್ದ ಮನೆಗೆ ನುಗ್ಗಿದ್ದಾನೆ. ಬಳಿಕ ಮನೆಯ ಒಳಗಿನಿಂದ ಚಿಲಕ ಹಾಕಿಕೊಂಡಿದ್ದಾನೆ. ಆದರೆ ಪುತ್ರಿಯನ್ನು ನೋಡಿಕೊಂಡು ಬರೋಣ ಎಂದು ತಾಯಿ ಬಂದಾಗ ಮನೆ ಒಳಗಿನಿಂದ ಚಿಲಕ ಹಾಕಿರುವುದು ಗೊತ್ತಾಗಿದೆ.

ಆದ್ದರಿಂದ ಕಾಲಿನಿಂದ ಒದ್ದು ಅವರು ಬಾಗಿಲನ್ನು ತೆರೆದಿದ್ದು ಪುತ್ರಿಯ ಸ್ಥಿತಿ ಕಂಡು ಶಾಕ್​ ಆಗಿದ್ದಾರೆ. ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿದ್ದ ಆರೋಪಿ, ಆಕೆಯ ಬಟ್ಟೆಗಳನ್ನೆಲ್ಲ ತೆಗಿದಿದ್ದ. ಬಾಗಿಲು ತೆರೆದ ಹಿನ್ನಲೆಯಲ್ಲಿ ಅವಿತು ಕುಳಿತಿದ್ದ. ಸಂತ್ರಸ್ತೆ ತಾಯಿಯ ಕಣ್ಣಿಗೆ ಬಿದ್ದಿದ್ದೇ ತಡ, ಒಳ ಉಡುಪು ಧರಿಸಿ ಎಸ್ಕೇಪ್​ ಆಗಲು ಯತ್ನಿಸಿದ್ದಾನೆ.

ತಕ್ಷಣ ಅಲರ್ಟ್​ ಆದ ಸ್ಥಳೀಯರು ಆರೋಪಿ ವಿಘ್ನೆಶ್​ನನ್ನು ಹಿಡಿದು ಮನಸೋ ಇಚ್ಛೆ ತಳಿಸಿದ್ದಾರೆ. ಬಳಿಕ ಪೊಲೀಸರಿಗೆ ವಿಘ್ನೇಶ್​​ನನ್ನು ಒಪ್ಪಿಸಲಾಗಿದ್ದು, ಆರೋಪಿಯನ್ನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಮಾತು ಬಾರದ, ಕಾಲು ಸ್ವಾಧೀನವಿಲ್ಲದ ಯುವತಿ ಮೇಲೆ ಈತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬೆಳವಣಿಗೆ ಇಲ್ಲದೆ ಇನ್ನು ಮಗುವಿನಂತೆ ಇರುವ ವಿಶೇಷ ಚೇತನ ಯುವತಿ ಮೇಲೆ ಕಣ್ಣು ಹಾಕಿರುವ ಈ ಕಾಮುಕನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.